ಕಳೆದು ಹೋದ ನಿನ್ನೆಗಳ,
ತಾತ
ನೆನಪುಗಳ ತಡಕಿದರೆ,
ಭಾರವಾದ ನಿಟ್ಟುಸಿರೊಂದು
ಆಸರೆಯಾಗುತ್ತದೆ.
ಆಲದ ಮರದ ಆಳವಾದ
ಬೇರುಗಳು ನೆನಪಿನಂಗಳದಲ್ಲಿ
ಜೋಕಾಲಿಯಾಡುತ್ತದೆ.
ಹೊಣೆಗಾರಿಕೆಯ ಭಾರಕ್ಕೆ ಬಾಗಿದ ಬೆನ್ನಿನ
ಹಣ್ಣಾಗಿ ಮಾಗಿದ ಬೆಳ್ಳಿ ಕೂದಲಿನ
ಊರಗಲ ಬೊಚ್ಚು ಬಾಯಗಲಿಸಿ
ಮಗುವಿನಂತೆ ನಗುವ ಆ ಕರ್ಣನ
ಆಲದಾ ಮರದಂತೆ ಜಗದಗಲ ಚಾಚಿ
ತನ್ನ ಚಾಚುವಿಕೆಯ ಕೆಳಗೆ ನೆರಳಾಗಿ
ಬೆಳಕನ್ನು ಚೆಲ್ಲಿ, ಎಳೆತರುಗಳಿಗೆ
ಆಸರೆಯಾದ ಹಿರಿಮರದಂತೆ,
ಬಾಯಾರಿದವರ ದಾಹ ಇಂಗಿಸುವ,
ಸದ್ದಿಲ್ಲದೆ ಹರಿವ ಗುಪ್ತಗಾಮಿನಿ,
ಈ ಮುದ್ದು ತಾತ.
ಎಲ್ಲ ಎಳೆಯರು ಕರೆದು
ಸುತ್ತ ಸೇರಿಸಿಕೊಂಡು, ಕಡಲೆ ಬೇಕೇ, ಕಾಳು ಬೇಕೇ ಎನ್ನುತ್ತ , ರಾಮಾಯಣ, ಭಾರತದ
ಕತೆಗಳನು ತಿರು ತಿರುವಿ ಹೇಳುತ್ತ,
ಕಾಲು ಎಳೆಯುತ್ತ, ಬುದ್ಧಿ ಹೇಳುತ್ತ,
ಕಥೆಯ ಹೆಣೆಯುತ್ತ, ತಪ್ಪು ತಿದ್ದುತ್ತ
ಕತ್ತಲದಾರಿಯಲ್ಲಿ ಜ್ಞಾನ ದೀಪವ
ಹಚ್ಚಿದವರು ಈ ಮುದ್ದು ತಾತ.
ಬಾಳೆಲ್ಲವೂ ತಾನು ದೀಪದ ಬತ್ತಿಯಂತೆ
ಉರಿದು, ಸುತ್ತೆಲ್ಲ ಬೆಳಕು ಬೀರಿ,
ಒಮ್ಮೆ ದ್ರೋಣನಂತೆ ಗುರುವಾಗಿ,
ಇನ್ನೊಮ್ಮೆ ಏನೂ ಅರಿಯದ ಮಗುವಾಗಿ,
ವಾಮನರೂಪದ ತ್ರಿ ವಿಕ್ರಮನಾಗಿ,
ದಶಾವತಾರ ತೋರಿದ ತಾತ,
ಅನಾಯಾಸೇನ ಮರಣಂ,
ವಿನಾ ದೈನ್ಯೇನ ಜೀವನಂ ಮಾತಿನಂತೆ,
ಮಾತಿಲ್ಲದೆ ಮೌನಕ್ಕೆ ಜಾರಿ ಹೋದರು,
ಕನಸಲ್ಲೂ ಕಾಡುವ ಮುದ್ದು ತಾತ..
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
CBSC ಯಿಂದ ಸ್ಟೇಟ್ ಬೋರ್ಡ್ ಗೆ
ಈಗೀಗ ಹೆಚ್ಚಾಗಿ ಮಕ್ಕಳು 10ನೇ ತರಗತಿಯವರೆಗೆ CBSC ಬೋರ್ಡಿನಲ್ಲಿ ಕಲಿಯುತ್ತಾರೆ. ಕೆಲವೊಂದು ವಿದ್ಯಾರ್ಥಿಗಳು ಪಿಯುಸಿಯನ್ನು ಅದೇ ಬೋರ್ಡಿನಲ್ಲಿ ಮುಂದುವರೆಸುತ್ತಾರೆ. ಹೆಚ...
-
ಹೇಳಿದ್ದು ಕೇಳಲು ಒಲವಿಲ್ಲದರಿಗೆ, ಕೇಳಿದರೂ ಉತ್ತರಿಸಲು ಇಚ್ಚೆಯಿಲ್ಲದರಿಗೆ, ಹೇಳಲು ಉತ್ತರವೇ ಇಲ್ಲದವರಿಗೆ, ಕೇಳಿ ಕೇಳಿ ಸುಸ್ತಾದವರಿಗೆ, ಕೇಳಿದ್ದನ್ನು ಈಡೇರಿಸಲಾಗದವರಿಗ...
-
ಕಲಿತ ವಿದ್ಯೆಯ ಮರೆತು, ಕೋಟಿ ವಿದ್ಯೆಯ ಕಲಿತು, ಬದುಕಿನ ಸಾಗರದಿ ಈಜು ಕಲಿಯುತ್ತಾ, ಬಂದ ಅಲೆಯ ಜೊತೆ ಒಂದಾಗಿ, ತೇಲುತ್ತ ಮುಳುಗುತ್ತ , ಕನಸಿನ ಹರಿಗೋಲು ಹಿಡಿದು, ಸೋಲದಾ ಛ...
-
ಬೆಕ್ಕುಗಳೆಂದರೆ ಯಾರಿಗೂ ಅಷ್ಟೇನೂ ಒಲವಿಲ್ಲ. ಅವುಗಳ ಅಂತರಂಗ ಅರಿವಾದರೆ ತಾನೇ! , ಇಷ್ಟವಾಗುವುದು. ಅವೇನೂ ಕೃತಘ್ನ ಪ್ರಾಣಿಗಳಲ್ಲ.. ಅನ್ನ ಕೊಡುವ ಕೈಯನ್ನು ಅದು ಮರೆಯುವ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ